
ಬೆಂಗಳೂರು, ಜನವರಿ 08: ಆಡಳಿತರೂಢ ಕಾಂಗ್ರೆಸ್ ನಲ್ಲಿ ಡಿನ್ನರ್ ಪೊಲಿಟಿಕ್ಸ್ ಜೋರಾಗಿದ್ದು, ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದಿದ್ದ ಡಿನ್ನರ್ ಮೀಟಿಂಗ್ ಬಗ್ಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಜಿ ಪರಮೇಶ್ವರ ಅವರು ಜನವರಿ 8 (ಇಂದು)ಕರೆದಿದ್ದ ಡಿನ್ನರ್ ಸಭೆಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ಎಸ್ಸಿ/ಎಸ್ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ ಮೇರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಸಭೆಯನ್ನು ಮುಂದೂಡಲಾಗಿದ್ದು, ಸಭೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.