Home ಕರ್ನಾಟಕ ಕರ್ನಾಟಕದ 3 ವಿಧಾನಸಭೆ ಸ್ಥಾನಗಳಿಗೆ ಉಪ ಕದನಕ್ಕೆ ಮುಹೂರ್ತ ನಿಗದಿ!

ಕರ್ನಾಟಕದ 3 ವಿಧಾನಸಭೆ ಸ್ಥಾನಗಳಿಗೆ ಉಪ ಕದನಕ್ಕೆ ಮುಹೂರ್ತ ನಿಗದಿ!

0
ಕರ್ನಾಟಕದ 3 ವಿಧಾನಸಭೆ ಸ್ಥಾನಗಳಿಗೆ ಉಪ ಕದನಕ್ಕೆ ಮುಹೂರ್ತ ನಿಗದಿ!

ನವದೆಹಲಿ, ಅಕ್ಟೋಬರ್ 15: ಕರ್ನಾಟಕದಲ್ಲಿ ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ, ಶಿಗ್ಗಾಂವ್‌ ಸಹಿತ ಮೂರು ವಿಧಾನಸಭೆ ಕ್ಷೇತ್ರಗಳಿಗೂ ಕರ್ನಾಟಕದಲ್ಲಿ ಮತದಾನದ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗವು ಪ್ರಕಟಿಸಿದೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲೂ ಮಾಜಿ ಸಚಿವ ಇ.ತುಕಾರಾಂ ರಾಜೀನಾಮೆ ತೆರವಾದ ಸ್ಥಾನಕ್ಕೆ ಮರು ಚುನಾವಣೆ ನವೆಂಬರ್‌ 13ಕ್ಕೆ ನಡೆಯಲಿದೆ. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ.

ದೇಶದಲ್ಲಿ 48 ವಿಧಾನಸಭೆ ಹಾಗೂ ಎರಡು ಲೋಕಸಭಾ ಸ್ಥಾನಗಳಿಗೆ ಮರು ಚುನಾವಣೆ ಮತದಾನ ದಿನಾಂಕ ಘೋಷಣೆಯಾಗಿದೆ. ಇದರಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳೂ ಇವೆ. ಕೇಂದ್ರ ಚುನಾವಣೆ ಆಯೋಗದ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಚುನಾವಣೆ ವೇಳಾ ಪಟ್ಟಿಯನ್ನು ಮಂಗಳವಾರ ಘೋಷಿಸಿದರು.

LEAVE A REPLY

Please enter your comment!
Please enter your name here