
ಬೆಳಗಾವಿ: ಜಿಲ್ಲೆಯ ಖಾನಾಪುರದ ಶಾಂತಿ ನಿಕೇತನ ಶಾಲೆಯ 36 ಮಕ್ಕಳು ಬಸ್ನಲ್ಲಿ ಪ್ರವಾಸಕ್ಕೆಂದು ಮೈಸೂರಿಗೆ ತೆರಳಿದ್ದು, , ನಗರದ ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ರಸ್ತೆ ಅಪಘಾತ ಸಂಭವಿಸಿದೆ.
ಶಾಲಾ ಮಕ್ಕಳಿದ್ದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ಸಾರ್ವಜನಿಕರು, ಗಾಯಾಳು ಮಕ್ಕಳನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮೈಸೂರು ನಗರಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಭೇಟಿ, ಮಕ್ಕಳಯೋಗಕ್ಷೇಮ ವಿಚಾರಿಸಿದ್ದಾರೆ.