Home ಬ್ರೇಕಿಂಗ್ ನ್ಯೂಸ್ ‘ಮೋದಿ ಹತ್ಯೆಗೆ ಸಂಚು’ ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಕರೆ; ಯಾರು ಬೆದರಿಕೆ ಹಾಕಿದಾಕೆ?

‘ಮೋದಿ ಹತ್ಯೆಗೆ ಸಂಚು’ ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಕರೆ; ಯಾರು ಬೆದರಿಕೆ ಹಾಕಿದಾಕೆ?

0
‘ಮೋದಿ ಹತ್ಯೆಗೆ ಸಂಚು’ ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಕರೆ; ಯಾರು ಬೆದರಿಕೆ ಹಾಕಿದಾಕೆ?

ಮುಂಬೈ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ(Prime Minister Modi)ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂ(Mumbai police )ಗೆ ಅಪರಿಚಿತರೊಬ್ಬರು ಕರೆ ಮಾಡಿದ್ದರಿಂದ ಆತಂಕ (Panic)ಸೃಷ್ಟಿಯಾಗಿದೆ.

ಕರೆ ಮಾಡಿದವರನ್ನು ಮಹಿಳೆ ಎಂದು ಗುರುತಿಸಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ, ಅಧಿಕಾರಿಗಳು ಕಾರ್ಯವಿಧಾನಗಳನ್ನು ಅನುಸರಿಸಿ ತನಿಖೆಯನ್ನು ಮುಂದುವರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಶಂಕಿತರನ್ನು ಪತ್ತೆ ಹಚ್ಚುವಾಗ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕಳೆದ ವರ್ಷ ಜುಲೈನಲ್ಲಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು, ಅದರಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath)ಅವರನ್ನು ಕೊಲ್ಲುವುದಾಗಿ ಎಚ್ಚರಿಕೆ ನೀಡಲಾಗಿತ್ತು .

ಅಧಿಕಾರಿಗಳ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬರು ಮುಂಬೈ ಪೊಲೀಸ್ ಕಂಟ್ರೋಲ್ ರೂಂನ ಸ್ಥಿರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಪ್ರಧಾನಿ ಮತ್ತು ಯುಪಿ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಕರೆ ಮಾಡಿದವರು ದೇಶದಲ್ಲಿ 26/11 ರೀತಿಯ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here