Home ಕರ್ನಾಟಕ ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಒತ್ತಾಯ

ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಒತ್ತಾಯ

0
ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಒತ್ತಾಯ

ಚನ್ನಮ್ಮನ ಕಿತ್ತೂರು,ಅಕ್ಟೋಬರ್ 16: ಸಂಸ್ಥಾನದ ಮಹಾರಾಣಿ ವೀರ ವನಿತೆ ರಾಣಿ ಚೆನ್ನಮ್ಮ ಅವರ 1824ರ ಮೊಟ್ಟ ಮೊದಲ ಬ್ರಿಟಿಷರ ವಿರುದ್ಧ ಸಂಗ್ರಾಮದ ವಿಜಯಕ್ಕೆ ಇದೇ ಅಕ್ಟೋಬರ್ 23 ಕ್ಕೆ 200 ವರ್ಷ ಸಂದಲಿದ್ದು, ಈ ಐತಿಹಾಸಿಕ ವಿಜಯದ ಸಲುವಾಗಿ ರಾಣಿ ಚೆನ್ನಮ್ಮ ಅವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು ಮನವಿ ಸಲ್ಲಿಸಿದ್ದರು.

ಅವರ ಮನವಿ ಮೇರೆಗೆ ಕೇಂದ್ರ ಸಚಿವರಾದ ಶ್ರೀ Jyotiraditya Scindia ಅವರನ್ನು ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರೊಂದಿಗೆ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸಂಸದರಾದ ಶ್ರೀ Iranna Kadadi – MP , ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ Arvind Bellad , ಮಾಜಿ ಸಂಸದರಾದ ಶ್ರೀ Annasaheb S. Jolle ಹಾಗೂ ಪಕ್ಷದ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here