
ಚನ್ನಮ್ಮನ ಕಿತ್ತೂರು, ಅಕ್ಟೊಬರ್ 21: ಉತ್ಸವದ ಅಂಗವಾಗಿ ಜನರ ಒತ್ತಾಸೆಯದ ಮೇರೆಗೆ ಗ್ರಾಮೀಣಕಲೆಯನ್ನು ಪ್ರೋತ್ಸಾಹಿಸಲು ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆ ಅ.27ರಂದು ಭಜನಾ ಸ್ಪರ್ಧೆ ಆಯೋಜಿಸಲಾಗಿದೆ.
ಪ್ರಥಮ ರೂ. 50000 ದ್ವಿತೀಯ ರೂ.25000ತೃತೀಯ ರೂ.15000 ಹೀಗೆ ಬಹುಮಾನ ಆಯೋಜಿಸಲಾಗಿದೆ.ಭಾಗವಹಿಸುವ ಎಲ್ಲ ತಂಡಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಿದ್ದಾರೆ.
ಉತ್ಸವದ ಮುಖ್ಯ ವೇದಿಕೆಯಲ್ಲಿ ಭಜನಾ ಸ್ಪರ್ಧೆ ನಡೆಯಲಿದೆ. ಆದ ಕಾರಣಸ್ಪರ್ಧೆಯಲ್ಲಿ ಭಾಗವಹಿಸುವ ಭಜನಾ ತಂಡಗಳು ಕನ್ನಡ ಮತ್ತು ಸಂಸ್ಕೃತಿಇಲಾಖೆಯಲ್ಲಿ ಹೆಸರು ನೋಂದಾಯಿಸಬೇಕೆಂದು ತಿಳಿಸಿದ್ದಾರೆ.