Home ಸ್ಥಳೀಯ ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ; ಜಾಗೃತಿ ಮೂಡಿಸಿದ ಘೋಷಣೆಗಳು

ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ; ಜಾಗೃತಿ ಮೂಡಿಸಿದ ಘೋಷಣೆಗಳು

0
ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ; ಜಾಗೃತಿ ಮೂಡಿಸಿದ ಘೋಷಣೆಗಳು

ಬೆಳಗಾವಿ, ಅಕ್ಟೋಬರ್ 25: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಚನ್ನಮ್ಮನ ಕಿತ್ತೂರು ಸಹಯೋಗದಲ್ಲಿ ಇಂದು, 25 ಅಕ್ಟೋಬರ್ 2024 ರಂದು ಬೆಳಗಾವಿಯಲ್ಲಿ ಜರುಗಿದ ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳವು ಅತ್ಯಂತ ಉತ್ಸಾಹಭರಿತವಾಗಿ ಸಾಗಿತು.

ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕಿರಪೂರಮಠ ಅವರು, ತಾಲೂಕು ದಂಡಾಧಿಕಾರಿ ರವೀಂದ್ರ ಹಾದಿಮನಿ ಮತ್ತು ಜಿಲ್ಲಾ ಮುಖ್ಯ ಆಯುಕ್ತರು ಗಜಾನನ ಮಣ್ಣಿಕೇರಿ ಉಪಸ್ಥಿತರಿದ್ದು, ಮೇಳಕ್ಕೆ ಚಾಲನೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಾಯ್. ತುಬಾಕದ, ಶಿಕ್ಷಣಾಧಿಕಾರಿ ಎಸ್.ಎಸ್. ನಾಗನೂರ, ಕ್ಷೇತ್ರ ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನ್ನವರ್ ಮತ್ತು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಕಾಶ ಮೆಳವಂಕಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಕಾರ್ಯಕ್ರಮದ ಅಂಗವಾಗಿ ರಾಣಿ ಚನ್ನಮ್ಮ ವೃತ್ತದಿಂದ ಕಿತ್ತೂರು ಉತ್ಸವದ ಮುಖ್ಯ ವೇದಿಕೆಯವರೆಗೆ ಪಥ ಸಂಚಲನೆ ನಡೆಯಿತು.

ಈ ಪಥ ಸಂಚಲನದಲ್ಲಿ 1200 ಕ್ಕೂ ಹೆಚ್ಚು ಸ್ಕೌಟ್ಸ್, ಗೈಡ್ಸ್, ಮತ್ತು ಜಿಲ್ಲಾ ಸಂಸ್ಥೆಯ ಸಂಘಟಕರು ಭಾಗವಹಿಸಿದ್ದರು. ಭಾಗವಹಿಸಿದ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗಿ ಜಾಗೃತಿಯನ್ನು ಮೂಡಿಸಿದರು.

LEAVE A REPLY

Please enter your comment!
Please enter your name here