Home ಕರ್ನಾಟಕ ತೀವ್ರಗೊಂಡ 2ಎ ಮೀಸಲಾತಿ ಹೋರಾಟ! ಸುವರ್ಣ ಸೌಧ ಮುತ್ತಿಗೆ ಯತ್ನ; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್! 20ಮಂದಿಗೆ ಗಂಭೀರ ಗಾಯ!

ತೀವ್ರಗೊಂಡ 2ಎ ಮೀಸಲಾತಿ ಹೋರಾಟ! ಸುವರ್ಣ ಸೌಧ ಮುತ್ತಿಗೆ ಯತ್ನ; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್! 20ಮಂದಿಗೆ ಗಂಭೀರ ಗಾಯ!

0
ತೀವ್ರಗೊಂಡ 2ಎ ಮೀಸಲಾತಿ ಹೋರಾಟ! ಸುವರ್ಣ ಸೌಧ ಮುತ್ತಿಗೆ ಯತ್ನ; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್! 20ಮಂದಿಗೆ ಗಂಭೀರ ಗಾಯ!

ಬೆಳಗಾವಿ, ಡಿಸೆಂಬರ್ 10: 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗುತ್ತಿದ್ದಂತೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ.ಬಸ್, ಕಾರು ಸೇರಿದಂತೆ ಹಲವು ವಾಹನಗಳ ಮೇಲೆ ಕಲ್ಲು ತೂರಲಾಗಿದೆ.

ಅನೇಕ ವಾಹನಗಳು ಜಖಂಗೊಂಡಿವೆ.ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಂತೆ ಹೋರಾಟಗಾರರನ್ನು ನಿಯಂತ್ರಿಸಲು ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here