Home ಸ್ಥಳೀಯ ನೇಗಿನಹಾಳದಲ್ಲಿ ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರಿಂದ ಅದ್ದೂರಿ ಸ್ವಾಗತ

ನೇಗಿನಹಾಳದಲ್ಲಿ ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರಿಂದ ಅದ್ದೂರಿ ಸ್ವಾಗತ

0
ನೇಗಿನಹಾಳದಲ್ಲಿ ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರಿಂದ ಅದ್ದೂರಿ ಸ್ವಾಗತ

ನೇಗಿನಹಾಳ, ಅಕ್ಟೊಬರ್ 21:ವೀರಮಾತೆ ರಾಣಿ ಕಿತ್ತೂರು ಚೆನ್ನಮ್ಮಾಜಿಯು 1824ರಲ್ಲಿ ಬ್ರಿಟಿಷ್ ರೊಂದಿಗೆ ಹೋರಾಡಿ ಬ್ರಿಟಿಷ್ ಅಧಿಕಾರಿ ಧಾರವಾಡದ ಕಲೆಕ್ಟರ್ ಠ್ಯಾಕರೆ ಅನ್ನು ಯುದ್ದದಲ್ಲಿ ಗುಂಡಿಕ್ಕಿ ಕೊಂದು ಬ್ರಿಟಿಷರನ್ನು ಹಿಮ್ಮೆಟಿಸಿದ ಸವಿ ನೆನಪಿಗಾಗಿ ಪ್ರತಿವರ್ಷ ವಿಜಯೋತ್ಸವ ಮಾಡುತ್ತಾ ಬರುತ್ತಿದ್ದು ಇಗ 200ವರ್ಷಗಳು ಗತಿಸಿದ್ದು ಅದರ ಸವಿ ನೆನಪಿಗಾಗಿ ರಾಜ್ಯಾದ್ಯಂತ ಅದ್ದೂರಿಯಾಗಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಚೆನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದ ಸಭಾಭವನದ ಮುಂದೆ ಚೆನ್ನಮ್ಮನ ಜ್ಯೋತಿ ಯಾತ್ರೆಯ ರಥಕ್ಕೆ ಸ್ವಾಗತ ಕೋರಿ ಪೂಜೆ ಸಲ್ಲಿಸಿ ಮಾತನಾಡಿದರು.

ನಮ್ಮ ನಾಡು ವೀರತ್ವದ ಗುಣ ಹೊಂದಿದೆ ಇಲ್ಲಿ ಶರಣಾಗತಿ ಬೇಡಿ ಬಂದವರಿಗೆ ರಕ್ಷಣೆ ನೀಡಿ ದಾಸೋಹ ಮಾಡಿದೆ. ದಂಡೆದ್ದು ಬಂದವರಿಗೆ ಸೋಲಿನ ರುಚಿ ತೋರಿಸಿ ಹಿಮ್ಮೆಟಿಸಿದೆ ಹೀಗಾಗಿ ಈ ವರ್ಷದ ಉತ್ಸವ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬೈಲಹೊಂಗಲ ತಹಶಿಲ್ದಾರ ಹನುಮಂತ ಶಿರಹಟ್ಟಿ, ಬಸವರಾಜ ಹುಬ್ಬಳ್ಳಿ, ಬಸವರಾಜ ಕೆರಕನ್ನವರ, ಯುವ ಧುರೀಣ ನಾನಾಸಾಹೇಬ ಪಾಟೀಲ, ಕಾಶಿನಾಥ ಇನಾಮದಾರ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಮಹಾದೇವಿ ಕೋಟಗಿ, ಶಿವಾನಂದ ದಿವಾಣದ, ಶಿವಾನಂದ ಮೆಟ್ಯಾಲ, ಮಹಾದೇವ ಮಡಿವಾಳರ, ಸುಭಾಷ ರುಮೋಜಿ, ಶಿವಾಜಿ ಮುತ್ತಗಿ, ಪ್ರಲ್ಹಾದ ಘಂಟಿ, ಮಹಾಂತೇಶ ದಿವಾಣದ, ಬಸವರಾಜ ಪೂಜೇರಿ, ಬಸನಗೌಡ ಪಾಟೀಲ ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಶಾಲಾ-ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು, ನೂರಾರು ಜನ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಬ್ಯಾಂಡ್, ಹಾಗೂ ವಿವಿಧ ಸಂಸ್ಕೃತಿ ತಂಡಗಳು ಭಾಗವಹಿಸಿದ್ದು ಪ್ರತಿಯೊಬ್ಬರೂ ತೆಲೆಗೆ ಹಳದಿ ಪೇಟ ಧರಿಸಿ ಮೆರವಣಿಗೆಯ ಅಂದ ಹೆಚ್ಚಿದರು.

LEAVE A REPLY

Please enter your comment!
Please enter your name here