Home ಕರ್ನಾಟಕ ಮಾಜಿ CM ಎಸ್. ಎಮ್. ಕೃಷ್ಣ ವಿಧಿವಶ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ! DCM ಡಿಕೆ ಶಿವಕುಮಾರ್ ಘೋಷಣೆ

ಮಾಜಿ CM ಎಸ್. ಎಮ್. ಕೃಷ್ಣ ವಿಧಿವಶ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ! DCM ಡಿಕೆ ಶಿವಕುಮಾರ್ ಘೋಷಣೆ

0
ಮಾಜಿ CM ಎಸ್. ಎಮ್. ಕೃಷ್ಣ ವಿಧಿವಶ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ!  DCM ಡಿಕೆ ಶಿವಕುಮಾರ್ ಘೋಷಣೆ

ಬೆಂಳೂರು, ಡಿಸೆಂಬರ್ 10: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಇದರ ಹಿನ್ನಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ.

ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.ಎಸ್ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಕೆ ಶಿವಕುಮಾರ್ ಬಳಿಕ ಮಾಧ್ಯಮದ ಜೊತೆ ಅಂತ್ಯಸಂಸ್ಕಾರ ವ್ಯವಸ್ಥೆ ಕುರಿತು ಮಾತನಾಡಿದ್ದಾರೆ.

ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದ್ದಾರೆ. ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಶೋಕಾಚರಣೆ ಇರಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಳೆ ಬೆಳಗ್ಗೆ 8 ಗಂಟೆ ವರೆಗೆ ಬೆಂಗಳೂರಿನ ಮನೆಯಲ್ಲಿ ಎಸ್ಎಂ ಕೃಷ್ಣ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಬಳಿಕ 10 ಗಂಟೆಯಿಂದ ಮಧ್ಯಾಹ್ನ ಮೂರು ಗಂಟೆ ವರೆಗೂ ಎಸ್ಎಂ ಕೃಷ್ಣ ಹುಟ್ಟೂರು ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here