
ಬೆಂಗಳೂರು, ಡಿಸೆಂಬರ್ 03: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ ‘ವಿಶ್ವ ವಿಕಲಚೇತನರ ದಿನಾಚರಣೆ-2024’ ಕಾರ್ಯಕ್ರಮದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ, ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವ್ಯಕ್ತಿಗಳಿಗೆ ಮುಖ್ಯ ಮಂತ್ರಿಗಳಾದ Siddaramaiah ಅವರ ನೇತ್ರತ್ವದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ-2024ರ ಅಂಗವಾಗಿ ಏರ್ಪಡಿಸಲಾಗಿದ್ದ ವಿಕಲ ಸಾಧನ ಸಲಕರಣೆಗಳ ಮಳಿಗೆಗಳನ್ನು ಮುಖ್ಯ ಮಂತ್ರಿಗಳಾದ Siddaramaiah ನವರು ಉದ್ಘಾಟಿಸಿದರು.
ಈ ವೇಳೆ ವಿಕಲ ಸಾಧನ ಸಲಕರಣೆಗಳ ಬಗ್ಗೆ ಮುಖ್ಯ ಮಂತ್ರಿಗಳಿಗೆ ಮಳಿಗೆಗಳ ಮಾಲೀಕರು ಮಾಹಿತಿ ನೀಡಿದರು. ಜೊತೆಗೆ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಎನ್.ಸಿದ್ದೇಶ್ವರ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಟಿ.ರಾಘವೇಂದ್ರ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.