Home ಸ್ಥಳೀಯ ಶಿಗ್ಗಾವಿಯಲ್ಲಿ ಸತೀಶ್ ತಂತ್ರ ಸಕ್ಸಸ್! ಬೆಳಗಾವಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ!

ಶಿಗ್ಗಾವಿಯಲ್ಲಿ ಸತೀಶ್ ತಂತ್ರ ಸಕ್ಸಸ್! ಬೆಳಗಾವಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ!

0
ಶಿಗ್ಗಾವಿಯಲ್ಲಿ ಸತೀಶ್ ತಂತ್ರ ಸಕ್ಸಸ್! ಬೆಳಗಾವಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ!

ಬೆಳಗಾವಿ, ನವೆಂಬರ್ 23 : ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ‌ಯಾಸಿರ್ ಪಠಾಣ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗಾವಿ ‌ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೊಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಗಮಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಿಹಿ ತಿನ್ನಿಸಿ ಪಟಾಕಿ ಸಿಡಿಸಿ, ಪುಷ್ಪಾರ್ಚನೆ ಮಾಡಿ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದರು.

ಈ ವೇಳೆ ಸಚಿವ ಸತೀಶ್‌ ಜಾರಕಿಹೊಳಿ ಮಾತನಾಡಿ, ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಲು ಬೆಳಗಾವಿಯ ಹಲವು ಕಾರ್ಯಕರ್ತರು ಶ್ರಮಿಸಿದ್ದು, ನಿಮ್ಮ ಶ್ರಮಕ್ಕೆ ಇಂದು ಪ್ರತಿಫಲ ದೊರೆತಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವು ಐತಿಹಾಸಿಕ ಗೆಲುವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಶಿಗ್ಗಾವಿಯಲ್ಲಿ ಅಹಿಂದ ಮತ ಪಡೆಯುವಲ್ಲಿ ನಾವು ಸಫಲರಾಗಿದ್ದೇವೆ. ಸುಮಾರು ಜನ ಚುನಾವಣೆಯಲ್ಲಿ ಭಾಗವಹಿಸಿ, ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ ಕೆಲಸಗಳು, ಯೋಜನೆಗಳನ್ನು ಜನಕ್ಕೆ ತಿಳಿಸುವ ಕೆಲಸ ಮಾಡಿದ್ದರಿಂದ ಯಾಸೀರ್ ಖಾನ್ ಪಠಾಣ್ ಅವರಿಗೆ ಜಯ ಸಿಕ್ಕಿದೆ ಎಂದ ಅವರು, ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಶ್ರಮಿಸಿದ ಸರ್ವರಿಗೂ ಇದೇ ವೇಳೆ ಅಭಿನಂದನೆ ಸಲ್ಲಿಸಿದರು.

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಬೇರೆ, ಬೇರೆ ನಾಯಕರು ಸಚಿವ ಸತೀಶ್ ಜಾರಕಿಹೊಳಿ ಅವರ ಕಾರ್ಯವೈಖರಿ ಅನುಸರಿಸಲಿ, ಏಕೆಂದರೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಅಸಾಧ್ಯವೆಂಬ ಭಾವನೆ ಎಲ್ಲರಲ್ಲಿ ಇತ್ತು. ಆದರೆ ಆ ಭಾವನೆಯನ್ನು ಹೋಗಲಾಡಿಸಿ, ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿದ್ದಾರೆ ಎಂದರು.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಅವರಿಂದಾಗಿ ತೆರವಾಗಿದ ಶಾಸಕ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ವಿಶೇಷ ಪ್ರಯತ್ನದಿಂದ ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವಾಗಿದ್ದರಿಂದ ಬೆಳಗಾವಿ ಕಾಂಗ್ರೆಸ್‌ ಭವನ ಎದುರು ಸಚಿವ ಸತೀಶ ಜಾರಕಿಹೊಳಿ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಕಾಂಗ್ರೆಸ್ ಪಕ್ಷಕ್ಕೆ, ಸಿಎಂ ಸಿದ್ದರಾಮಯ್ಯ‌ ಹಾಗೂ ಸಚಿವ ಸತೀಶ್ ಜಾರಕಿಹೊಳಿ‌ ಗೆ ಜೈಕಾರ ಹಾಕಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here