
ಚನ್ನಮ್ಮನ ಕಿತ್ತೂರು: ಕೂಸಿನ ಮನೆಯೊಂದು ಉತ್ತಮವಾದ ಯೋಜನೆಯಾಗಿದ್ದು ಆರೈಕೆದಾರರು ಮಕ್ಕಳನ್ನು ಸೂಕ್ಷ್ಮವಾಗಿ ಜಾಗೃತಿಯಿಂದ ಗಮನವಿಟ್ಟು ನೋಡಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಘೋರ್ಪಡೆ ತಿಳಿಸಿದರು.
ಇಲ್ಲಿಯ ತಾಲೂಕು ಪಂಚಾಯತ ಸಭಾ ಭವನದಲ್ಲಿ ಸೋಮವಾರ 2 ನೇ ಹಂತದ ಕೂಸಿನ ಮನೆ ಆರೈಕೆದಾರರಿಗೆ ಒಂದು ವಾರದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳನ್ನು ನೋಡಿಕೊಳ್ಳುವ ಕೆಲಸ ಉತ್ತಮವಾದದ್ದು ಅದು ನಿಮಗೆ ದೊರಕಿರುವುದು ಪೂರ್ವ ಜನ್ಮದ ಪುಣ್ಯ. ಮಕ್ಕಳ ಆರೈಕೆದಾರರಾಗಿ ಕಾರ್ಯ ನಿರ್ವಹಿಸುತ್ತಿರುವು ನೀವು ಕೂಸಿನ ಮನೆಯಲ್ಲಿ ಮಕ್ಕಳಿಗೆ ಪೋಷಕರ ಸ್ಥಾನದಲ್ಲಿ ಇದ್ದು ಮಕ್ಕಳ ಲಾಲನೆ ಪಾಲನೆ ಹಾಗೂ ಪೋಷಣೆ ಮಾಡುವುದು ನಿಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದ ಅವರು ಮಕ್ಕಳ ಆರೈಕೆ ಹೇಗೆ ಮಾಡಬೇಕು ಎಂಬುವುದರ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.
ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ರಿಷಲ್ದಾರ್ ಮಾತನಾಡಿ ನರೇಗಾ ಕೂಲಿ ಕಾರ್ಮಿಕರ ಮಕ್ಕಳ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಕ್ಕಳ ಆರೈಕೆ ಮಾಡುವ ಉದ್ದೇಶದಿಂದ ಸರ್ಕಾರ ಕೂಸಿನ ಮನೆ ಬರುವ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳನ್ನ ತಮ್ಮ ಮಕ್ಕಳಂತೆ ಪಾಲನೆ ಪೋಷಣೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಲೆಕ್ಕಾಧಿಕಾರಿ ಈರಣ್ಣ ಕಮ್ಮಾರ, ಮಾಸ್ಟರ್ ಟ್ರೆನರ್ಸ್ ಬೇಬಿ ಕಮತಗಿ, ಚನ್ನಮ್ಮ ನಾಯಕ, ಐಇಸಿ ಸಂಯೋಜಕಿ ಎಸ್ ಬಿ ಜವಳಿ, ವಿಷಯ ನಿರ್ವಾಹಕ ಲಚ್ಚಪ್ಪ ಗೊಡಚಿ, ಡಿಟಿಸಿ ಆರತಿ ನವಲೂರು, ರೂಪಾ ಹುಲಮನಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತಗಳ ಕೂಸಿನ ಮನೆ ಆರೈಕೆದಾರರು ಇದ್ದರು.