
ಚನ್ನಮ್ಮನಕಿತ್ತೂರು, ಅಕ್ಟೋಬರ್ 25: ಮುಖಮಂತ್ರಿ ಸಿದ್ದರಾಮಯ್ಯ ಕಿತ್ತೂರು ಉತ್ಸವ -2024ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ಮೂರು ದಿನಗಳು ನಡೆದ ಉತ್ಸವದಲ್ಲಿ ಹಲವು ಕಾರ್ಯಕ್ರಮಗಳು ನಡೆದವು. ಇವತ್ತಿನ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಕಿತ್ತೂರು, ಚನ್ನಮ್ಮ, ರಾಯಣ್ಣ, ಕುರಿತಾಗಿ ಮಾತನಾಡುತ್ತಿದ್ದಾರೆ.
ಬಹಳ ವರ್ಷಗಳ ಬಳಿಕ ಕಿತ್ತೂರು ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಆಗಮಿಸಿದ್ದಾರೆ. ಕಿತ್ತೂರಿಗೆ ಆಗಮಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪಟ್ಟಣದಲ್ಲಿರುವ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಮುಖ್ಯ ವೇದಿಕೆಯ ಸಮಾರಂಭದಲ್ಲಿ ಶಾಸಕ ಬಾಬಾಸಾಹೇಬ್ ಪಾಟೀಲ್, ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದಾರೆ.