Home ಕರ್ನಾಟಕ ಸಿದ್ದರಾಮಯ್ಯ ಪತ್ನಿ ಪತ್ರದಲ್ಲಿ ವೈಟ್ನರ್ ಬಳಕೆ; ಸತ್ಯ ಒಪ್ಪಿಕೊಂಡ ಪಾರ್ವತಿ? ಲೋಕಾ ತನಿಖೆಯಲ್ಲಿ ಬಿಚ್ಚಿಟ್ಟ ಸತ್ಯ ಯಾವುದು?

ಸಿದ್ದರಾಮಯ್ಯ ಪತ್ನಿ ಪತ್ರದಲ್ಲಿ ವೈಟ್ನರ್ ಬಳಕೆ; ಸತ್ಯ ಒಪ್ಪಿಕೊಂಡ ಪಾರ್ವತಿ? ಲೋಕಾ ತನಿಖೆಯಲ್ಲಿ ಬಿಚ್ಚಿಟ್ಟ ಸತ್ಯ ಯಾವುದು?

0
ಸಿದ್ದರಾಮಯ್ಯ ಪತ್ನಿ ಪತ್ರದಲ್ಲಿ ವೈಟ್ನರ್ ಬಳಕೆ; ಸತ್ಯ ಒಪ್ಪಿಕೊಂಡ ಪಾರ್ವತಿ? ಲೋಕಾ ತನಿಖೆಯಲ್ಲಿ ಬಿಚ್ಚಿಟ್ಟ ಸತ್ಯ ಯಾವುದು?

ಮೈಸೂರು, ಅಕ್ಟೋಬರ್ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಂದ ಮೂರು ಗಂಟೆಗಳ ಕಾಲ ವಿಚಾರಣೆಗೊಳಗಾದ ಮುಖ್ಯಮಂತ್ರಿ ಸಿದ್ದರಾಮಯ್ಯ(CM SIDDARAMAIH)ಅವರ ಪತ್ನಿ ಪಾರ್ವತಿ ಅವರು ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಪತ್ರಕ್ಕೆ ವೈಟ್ನರ್ ಹಾಕಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದು, ಅವರ ಪತ್ನಿ ಎರಡನೇ ಆರೋಪಿಯಾಗಿದ್ದಾರೆ. ಪಾರ್ವತಿ ಅವರು ಶುಕ್ರವಾರ ಮೈಸೂರು ಲೋಕಾಯುಕ್ತ ಎಸ್ ಪಿ ಟಿ.ಜೆ. ಉದೇಶ ಅವರ ಕಚೇರಿಯಲ್ಲಿ ವಿಚಾರಣೆ ಎದುರಿಸಿದ್ದಾರೆ. ಸಿಎಂ ಪತ್ನಿಯ ಹೇಳಿಕೆ ವಿಡಿಯೋ ಕ್ಯಾಮರಾದಲ್ಲಿ ದಾಖಲಾಗಿದೆ.

ತನಿಖೆ ವೇಳೆ ಪರಿಹಾರದ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಡಾಕ್ಕೆ ಸಲ್ಲಿಸಿದ್ದ ಮನವಿ ಪತ್ರಕ್ಕೆ ವೈಟ್ನರ್ ಹಾಕಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ವಾಕ್ಯದಲ್ಲಿ ತಪ್ಪಿದ್ದ ಕಾರಣಕ್ಕೆ ವೈಟ್ನರ್ ಬಳಸಬೇಕಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ. ತಪ್ಪು ಏನು ಎಂದು ತನಗೆ ನಿಖರವಾಗಿ ನೆನಪಿಲ್ಲ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಿವೇಶನಗಳನ್ನು ಮಂಜೂರು ಮಾಡುವಂತೆ ಬೇಡಿಕೆ ಇಟ್ಟಿರುವುದನ್ನು ಮರೆಮಾಚಲು ಮುಡಾ ಪ್ರಕರಣ ಬೆಳಕಿಗೆ ಬಂದ ನಂತರ ಮನವಿ ಪತ್ರಕ್ಕೆ ವೈಟ್ನರ್ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here