Home ಸ್ಥಳೀಯ ನಿರ್ಗತಿಕ ಕುಟುಂಬಕ್ಕೆ ನೆರವಾದ ಸಚಿವೆ ಹೆಬ್ಬಾಳ್ಕರ್!

ನಿರ್ಗತಿಕ ಕುಟುಂಬಕ್ಕೆ ನೆರವಾದ ಸಚಿವೆ ಹೆಬ್ಬಾಳ್ಕರ್!

0
ನಿರ್ಗತಿಕ ಕುಟುಂಬಕ್ಕೆ ನೆರವಾದ ಸಚಿವೆ ಹೆಬ್ಬಾಳ್ಕರ್!

ವಿಜಯಪುರ: ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ವಿಜಯಪುರಕ್ಕೆ ಪ್ರವಾಸ ಕೈಗೊಂಡು, ಬೆಳಗಾವಿಗೆ ವಾಪಸ್ ಬರುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದೆ ಕುಟುಂಬಕ್ಕೆ ನೆರವಾಗುವ ಭರವಸೆ ನೀಡಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದ್ರು.

ವಿಜಯಪುರ-ಬಾಗಲಕೋಟೆಯ ಹೆದ್ದಾರಿಯ ಪಕ್ಕ ಹನಗನಹಳ್ಳಿಯ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ವಾಹನ ನಿಲ್ಲಿಸಿದ ವೇಳೆ, ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬಳು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ ಮುಂದೆ ಇಡುತ್ತಿದ್ದಳು. ಆ ಬಗ್ಗೆ ವಿಚಾರಿಸಿದಾಗ ರಸ್ತೆಯಲ್ಲಿ ಹೋಗುವ ಜನರು ನೀರು ಕುಡಿಯಲು ಬರುತ್ತಾರೆ. ಅವರಿಗೆ ಸಹಾಯವಾಗಲೆಂದು ಬಾಟಲಿಗಳಲ್ಲಿ ತುಂಬಿ ಇಡುವುದಾಗಿ ತಿಳಿಸಿದಳು. ಹಾಗೆ ಮಾತನಾಡುತ್ತ ಗೌರಮ್ಮ ವಾಡೆದ್ ಎಂಬ ಅಜ್ಜಿ ಹಾಗೂ ಜೊತೆಗಿದ್ದ ಮಲ್ಲು ಹೆಸರಿನ ಮಗನ ಕುರಿತು ವಿಚಾರಿಸಿದಾಗ, ಅವರು ಹಳ್ಳಿಯಲ್ಲಿ ಹೊಂದಿದ್ದ ಮನೆಯ ಜಾಗ ರಸ್ತೆ ಮಾಡುವಾಗ ಕೈ ತಪ್ಪಿದೆ. ಇದರಿಂದಾಗಿ ವಾಸಿಸಲು ಮನೆ ಇರಲಿಲ್ಲ. ನಂತರ ಈ ಸ್ಥಳದಲ್ಲಿದ್ದ ತೋಟದ ಮಾಲಕರು ಒಂದೇ ಕೊಠಡಿಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿದರು. ಆದರೆ ಅಡುಗೆ ಮಾಡಲು ಪಾತ್ರೆಗಳಾಗಲಿ, ಹಾಸಿಗೆ- ಹೊದಿಕೆಗಳಾಗಲಿ, ಕಾಳು ಕಡಿಗಳಾಗಲಿ ಏನೂ ಇಲ್ಲದೆ ಊಟಕ್ಕೂ ಸರಿಯಾಗಿ ಗತಿ ಇಲ್ಲ ಎನ್ನುವ ಅಂಶ ಗೊತ್ತಾಯಿತು.ಈ ಮೊದಲು ಹೊಂದಿದ್ದ ಪಡಿತರ ಕಾರ್ಡ್ ಕೂಡ ಕಳೆದುಹೋಗಿದ್ದರಿಂದ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎನ್ನುವುದು ಕೂಡ ತಿಳಿಯಿತು. ಕೂಡಲೇ ಸ್ವಲ್ಪಮಟ್ಟಿಗೆ ಆರ್ಥಿಕ ನೆರವು ನೀಡಿ, ಆದಷ್ಟು ಬೇಗ ರೇಶನ್ ಕಾರ್ಡ್ ಮತ್ತು ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವ ಬಗ್ಗೆ ತಿಳಿಸಿ, ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದರು.

ನೆರವು ನೀಡಿದ ಪೊಲೀಸ್ ಅಧಿಕಾರಿಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಎ.ಎಸ್.ಐ ಎಚ್.ಎಸ್.ಗೌಡರ್ ಅಧಿಕಾರಿ ನನ್ನ ಬಳಿ ಬಂದು, ಅಜ್ಜಿಯ ಕುಟುಂಬದ ಪರಿಸ್ಥಿತಿ ವಿವರಿಸಿದರು. ಆಗ ಅಜ್ಜಿ, ತಾವು ಉಪವಾಸವಿದ್ದ ಸಂದರ್ಭದಲ್ಲಿ ಎ.ಎಸ್.ಐ ತಮಗೆ ಅಕ್ಕಿ ನೀಡಿ, ಸಹಾಯ ಮಾಡಿರುವ ಬಗ್ಗೆ ಮಾತನಾಡಿದರು.

ಇದೇ ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಕ್ಕಾಗಿ ಸರಕಾರದ ಪರವಾಗಿ ಎಎಸ್ಐ ಗೌಡರ್ ಗೆ ಧನ್ಯವಾದ ತಿಳಿಸಿದೆ.ನಿರ್ಗತಿಕರಿಗಾಗಿಯೇ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳು ಬಡವರಿಗಾಗಿಯೇ ಯೋಜನೆಗಳನ್ನು ತಂದಿದ್ದಾರೆ. ಅದು ಯಾರಿಗೆ ತಲುಪಿಲ್ಲವೋ ಅಂತವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುವುದು. ಎಎಸ್ಐ ಗೌಡರ್ ಮನುಷ್ಯತ್ವ ತೋರಿಸಿ ಅಜ್ಜಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ. ಅವರ ಕಾರ್ಯ ಸ್ವಾಗತಾರ್ಹ. ಸರಕಾರದಿಂದ ಆ ಕುಟುಂಬಕ್ಕೆ ಎಲ್ಲ ನೆರವು ಸಿಗುವಂತೆ ಮಾಡುತ್ತೇನೆ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದರು.

LEAVE A REPLY

Please enter your comment!
Please enter your name here