Home ಕರ್ನಾಟಕ ಇಂದಿನಿಂದ ಬೆಳಗಾವಿ ಅಧಿವೇಶನ ಶುರು! ಸರ್ಕಾರ ಕಟ್ಟಿಹಾಕಲು ವಿಪಕ್ಷಗಳು ಸರ್ವ ಸನ್ನದ್ಧ! ಮತ್ತೇನು ಬೆಳವಣಿಗೆ?

ಇಂದಿನಿಂದ ಬೆಳಗಾವಿ ಅಧಿವೇಶನ ಶುರು! ಸರ್ಕಾರ ಕಟ್ಟಿಹಾಕಲು ವಿಪಕ್ಷಗಳು ಸರ್ವ ಸನ್ನದ್ಧ! ಮತ್ತೇನು ಬೆಳವಣಿಗೆ?

0
ಇಂದಿನಿಂದ ಬೆಳಗಾವಿ ಅಧಿವೇಶನ ಶುರು! ಸರ್ಕಾರ ಕಟ್ಟಿಹಾಕಲು ವಿಪಕ್ಷಗಳು ಸರ್ವ ಸನ್ನದ್ಧ! ಮತ್ತೇನು ಬೆಳವಣಿಗೆ?

ಬೆಳಗಾವಿ, ಡಿಸೆಂಬರ್ 09: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸಂತಾಪ ಸೂಚನಾ ನಿರ್ಣಯ ಮಂಡನೆಯಾಗಲಿದ್ದು, ಕಳೆದ ಅಧಿವೇಶನದಿಂದ ಈಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಬಳಿಕ ಪ್ರಶ್ನೋತ್ತರ ಅವಧಿ ಕೈಗೆತ್ತಿಕೊಂಡು ಕಲಾಪ ಮುಂದೂಡಲಾಗುವುದು. ಮಧ್ಯಾಹ್ನ 3ಕ್ಕೆ ಕಲಾಪ ಸಲಹಾ ಸಮಿತಿ ಸಭೆ ನಡೆಸಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಬೇಕಿರುವ ವಿಚಾರಗಳ ಬಗ್ಗೆ ಅಂತಿಮ ನಿರ್ಧಾರಿಸಲಾಗುವುದು ಎಂದು ವರದಿಗಳು ತಿಳಿಸಿವೆ.

ಇದಕ್ಕೂ ಮೊದಲು ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಚನ್ನಪಟ್ಟಣದ ಸಿಪಿ.ಯೋಗೇಶ್ವರ್, ಸಂಡೂರಿನ ಇ.ಅನ್ನಪೂರ್ಣ ಹಾಗೂ ಶಿಗ್ಗಾಂವಿಯ ಯೂಸುಫ್ ಖಾನ್ ಪಠಾನ್ ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಲಾದದ ವೇಳೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ, ವಕ್ಫ್ ವಿವಾದ, ವಾಲ್ಮೀಕಿ ನಿಗಮ ಹಗರಣ, ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಸಾವು, ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿದ್ದು, ಪ್ರತಿಪಕ್ಷಗಳು ಆಡಳಿತ ಪಕ್ಷವನ್ನು ಕಟ್ಟಿ ಹಾಕಲು ತಂತ್ರ ರೂಪಿಸಿವೆ.

LEAVE A REPLY

Please enter your comment!
Please enter your name here