Home ಕರ್ನಾಟಕ ‘ಜಾರಕಿಹೊಳಿ ವಿರುದ್ಧ ಶ್ರೀರಾಮುಲು ಎತ್ತಿಕಟ್ಟಲು ಪ್ಲ್ಯಾನ್’ DCM ಶಿವಕುಮಾರ್ ಪೊಲಿಟಿಕಲ್ ತಂತ್ರ ಬಿಚ್ಚಿಟ್ಟ ರೆಡ್ಡಿ!

‘ಜಾರಕಿಹೊಳಿ ವಿರುದ್ಧ ಶ್ರೀರಾಮುಲು ಎತ್ತಿಕಟ್ಟಲು ಪ್ಲ್ಯಾನ್’ DCM ಶಿವಕುಮಾರ್ ಪೊಲಿಟಿಕಲ್ ತಂತ್ರ ಬಿಚ್ಚಿಟ್ಟ ರೆಡ್ಡಿ!

0
‘ಜಾರಕಿಹೊಳಿ ವಿರುದ್ಧ ಶ್ರೀರಾಮುಲು ಎತ್ತಿಕಟ್ಟಲು ಪ್ಲ್ಯಾನ್’ DCM ಶಿವಕುಮಾರ್ ಪೊಲಿಟಿಕಲ್ ತಂತ್ರ ಬಿಚ್ಚಿಟ್ಟ ರೆಡ್ಡಿ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವಾಲ್ಮೀಕಿ ಹಾಗೂ ಎಸ್‌ಟಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಪರ್ಯಾಯ ನಾಯಕರನ್ನು ಬೆಳೆಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀರಾಮುಲು ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಮುಲು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ, ಆದರೆ ನನ್ನ ಆರೋಪ ಮಾಡಿ ಹೋಗೋದು ಬೇಡ, ನಾನು 40 ವರ್ಷಗಳಲ್ಲಿ ಅವರಿಗೆ ಮಾಡಿರುವ ಸಹಾಯವನ್ನು ಬೂದಿಯಲ್ಲಿ ಹಾಕಿ, ಎಲ್ಲವನ್ನು ಮರೆತು ಹೋಗುವುದಾದರೇ ಹೋಗಲಿ ಎಂದಿದ್ದಾರೆ.

ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ಬಳ್ಳಾರಿ ಜನ ಮಾತನಾಡಿಕೊಳ್ಳತ್ತಿದ್ದಾರೆ.ಪಕ್ಷ ಬಿಡೋದು ಅವರ ವೈಯಕ್ತಿಕ ವಿಚಾರ. ಹೋಗುವುದಾದರೆ ಅವರು ಹೋಗಲಿ. ಪಕ್ಷ ಬಿಟ್ಟು ಹೋಗುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ರೆಡ್ಡಿ ತಿರುಗೇಟು ನೀಡಿದರು.

ನಾನು ಭಗವಂತನನ್ನು ನಂಬಿದ್ದೇನೆ, ಕರ್ಮ ಯಾರನ್ನು ಬಿಡುವುದಿಲ್ಲ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಷಯವನ್ನು ಸವಿಸ್ತಾರವಾಗಿ ಹೇಳುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here