Home ಕರ್ನಾಟಕ ಮುಡಾ ಹಗರಣದಿಂದ ಸಿದ್ದು ದಂಪತಿ ಮುಕ್ತ.. ಮುಕ್ತ..! ಲೋಕಾ ತನಿಖೆ ಕಂಪ್ಲೀಟ್; ವರದಿಯಲ್ಲಿ ಕ್ಲಿನಚಿಟ್!

ಮುಡಾ ಹಗರಣದಿಂದ ಸಿದ್ದು ದಂಪತಿ ಮುಕ್ತ.. ಮುಕ್ತ..! ಲೋಕಾ ತನಿಖೆ ಕಂಪ್ಲೀಟ್; ವರದಿಯಲ್ಲಿ ಕ್ಲಿನಚಿಟ್!

0
ಮುಡಾ ಹಗರಣದಿಂದ ಸಿದ್ದು ದಂಪತಿ ಮುಕ್ತ.. ಮುಕ್ತ..! ಲೋಕಾ ತನಿಖೆ ಕಂಪ್ಲೀಟ್;   ವರದಿಯಲ್ಲಿ ಕ್ಲಿನಚಿಟ್!

ಬೆಂಗಳೂರು, ಜನವರಿ 23: ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗಿದೆ.

ಸೋಮವಾರ ಕೋರ್ಟ್ಗೆ ಸಲ್ಲಿಕೆಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

LEAVE A REPLY

Please enter your comment!
Please enter your name here